fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಮಂಗಳವಾರ, ಜೂನ್ 20, 2017

ಜಾಣ ತಿಮ್ಮ

ಬಾಳೆಯ ತೋಟದ ಪಕ್ಕದ ಕಾಡೊಳು
ವಾಸಿಸುತಿದ್ದವು ಮಂಗಗಳು
ಮಂಗಗಳೆಲ್ಲವು ಒಟ್ಟಿಗೆ ಸೇರುತ
ಒಂದುಪವಾಸವ ಮಾಡಿದವು .
ಏನೂ ತಿನ್ನದೆ ಮಟ ಮಟ ನೋಡುತ
ಇದ್ದವು ಮರದಲಿ ಕುಳಿತಲ್ಲೇ
"ನಾಳೆಗೆ ತಿಂಡಿಯ ಈಗಲೇ ಹುಡುಕುವ
ಬನ್ನಿರಿ " ಎಂದಿತು ಕಪಿಯೊಂದು
"ಹೌದೌದಣ್ಣಾ" ಎಂದೆನ್ನುತ ಎಲ್ಲವು
ಬಾಳೆಯ ತೋಟಕೆ ಹಾರಿದವು
ತೋಟದಿ ಬಾಳೆಯ ಹಣ್ಣನು ನೋಡಲು
ಆಶೆಯು ಹೆಚ್ಚಿತು ನೀರೂರಿ
"ಸುಲಿದೇ ಇಡುವ ಆಗದೆ " ಎಂದಿತು
ಆಶೆಯ ಮರಿಕಪಿಯೊಂದಾಗ
"ಹೌದೌದೆನ್ನುತ" ಹಣ್ಣನು ಸುಲಿದವು
ಕೈಯೊಳೆ ಹಿಡಿದು ಕುಳಿತಿರಲು
"ಕೈಯ್ಯಲ್ಲೇತಕೆ ಬಾಯೊಳಗಿಟ್ಟರೆ
ಆಗದೆ ? " ಎಂದಿತು ಇನ್ನೊಂದು
ಹಣ್ಣನು ಬಾಯಲಿ ಇಟ್ಟವು
"ಜಗಿದೇ ಇಡುವೆವುಎಂದಿತು ಕಪಿ ಮತ್ತೊಂದು
ಜಗಿದೂ ಜಗಿದೂ ನುಂಗಿದವೆಲ್ಲವು
ಆಗಲೇ ಮುಗಿಯಿತು ಉಪವಾಸ .
                                                   (ಕವಿ : ಮಚ್ಚಿಮಲೆ ಶಂಕರನಾರಾಯಣ ರಾವ್ )

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು